ಚಿಕ್ಕಮಗಳೂರು: ಕುದುರೆ ಮುಖ ಬಸರೀಕಲ್ ಚೆಕ್ ಪೋಸ್ಟ್ ಪೆಟ್ರೋಲ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು-ಉಡುಪಿ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.
ದಾಳಿ ಹಿಂದೆ ನಕ್ಸಲ್ ಬೆಂಬಲಿಗರ ಕೃತ್ಯದ ಶಂಕೆ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ದಿಂದ ಈ ಕೂಬಿಂಗ್ ಕಾರ್ಯ ಚುರುಕುಗೊಂಡಿದೆ. ಕೇರಳದ ನಕ್ಸಲರು ಮಲೆನಾಡಿನಲ್ಲಿ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಚಿಕ್ಕಮಗಳೂರು-ಉಡುಪಿ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾನುವಾರ ಬೆಳಗಿನ ಸಮಯದಲ್ಲಿ ಕಚೇರಿಯ ಮೇಲೆ ದಾಳಿ ಮಾಡಿದ್ದರಿಂದ ಕತ್ತಲಲ್ಲಿ ದುಷ್ಕರ್ಮಿಗಳು ಕಾಣಲಿಲ್ಲ. 6 ಪೆಟ್ರೋಲ್ ಬಾಂಬ್ ಗಳನ್ನು ದುಷ್ಕರ್ಮಿಗಳು ಕಚೇರಿಯ ಮೇಲೆ ಎಸೆದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿರಲಿಲ್ಲ.