ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಬಂಧನಕ್ಕೆ ಒಳಗಾಗಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲಾಗಿದೆ.
ಜೈಲಿಗೆ ಬರುತ್ತಿದ್ದಂತೆ ಗಣೇಶ್ ಹೊಟ್ಟೆನೋವು ಎಂದು ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಹಿರಿಯ ವೈದ್ಯರಿಂದ ಗಣೇಶ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ರಾಮನಗರ ಕೋರ್ಟ್ ಗೆ ಹಾಜರುಪಡಿಸಿದ ಬಳಿಕ, ಮಾರ್ಚ್ 6 ರವರೆಗೆ ಗಣೇಶ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜೈಲಿಗೆ ಬಂದ ಗಣೇಶ್ ಜೈಲು ಸಿಬ್ಬಂದಿಗೆ ವೈಯಕ್ತಿಕ ಮಾಹಿತಿ ನೀಡಿದ್ದಾರೆ.
ಈ ವೇಳೆ ಹೊಟ್ಟೆನೋವು ಎಂದು ಹೇಳಿದ ಗಣೇಶ್ ಅವರಿಗೆ ಜೈಲಿನ ವೈದ್ಯರು ಪರೀಕ್ಷೆ ನಡೆಸಿದ್ದಾರೆ. ಅಸ್ತಮಾ ಮತ್ತು ಹರ್ನಿಯಾ ಸಮಸ್ಯೆ ಇರುವುದಾಗಿ ಗಣೇಶ್ ವೈದ್ಯರಿಗೆ ಮಾಹಿತಿ ನೀಡಿದ್ದು, ಜೈಲಿನ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.