ತುಮಕೂರು, ಅ. 10 : ವಿದ್ಯುತ್ ತಂತಿ ಸ್ಪರ್ಶಿಸಿ ಪೌರಕಾರ್ಮಿಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದಿದೆ.
ಮೃತ ಪೌರಕಾರ್ಮಿಕನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮಹಾನಗರ ಪಾಲಿಕೆ ಆವರಣದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸುವಂತೆ ಪಾಲಿಕೆ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ನರಸಿಂಹಮೂರ್ತಿ ಫ್ಲೆಕ್ಸ್ ಗಳನ್ನು ತೆರವು ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ನರಸಿಂಹಮೂರ್ತಿ ಮೃತಪಟ್ಟಿದ್ದಾರೆ.