ವೀರ ಯೋಧ ಹೆಚ್. ಗುರು ಹುತಾತ್ಮ

ವೀರ ಯೋಧ ಹೆಚ್. ಗುರು ಹುತಾತ್ಮ

ಜಮ್ಮು-ಕಾಶ್ಮೀರದಲ್ಲಿ ಇಂದು ಮಧ್ಯಾಹ್ನ ನಡೆದ ಉಗ್ರರ ದಾಳಿಗೆ ಮಂಡ್ಯ ಜಿಲ್ಲೆಯ ಯೋಧ ನೋರ್ವ ಹುತಾತ್ಮನಾಗಿದ್ದಾನೆ ಎಂದು ವರದಿಯಾಗಿದೆ.

ಮದ್ದೂರು ತಾಲೂಕು ಭಾರತೀ ನಗರ ಸಮೀಪದ ಗುಡಿಗೆರೆ ಗ್ರಾಮದ ಪೊನ್ನಯ್ಯ ಮತ್ತು ಚಿಕ್ಕೋಳಮ್ಮ ದಂಪತಿ ಪುತ್ರ ಹೆಚ್. ಗುರು (33) ಹುತಾತ್ಮರಾದ ಯೋಧರಾಗಿದ್ದು, ಇವರು ರಜೆಗಾಗಿ ಗ್ರಾಮಕ್ಕೆ ಬಂದಿದ್ದು, ಕಳೆದ ವಾರವಷ್ಟೇ ಕರ್ತವ್ಯಕ್ಕೆ ಹಿಂತಿರುಗಿದ್ದರು ಎಂದು ಹೇಳಲಾಗಿದೆ.

ಹುತಾತ್ಮ ಗುರು ಕಳೆದ ಆರು ತಿಂಗಳ ಹಿಂದೆಯಷ್ಟೇ ಸಾತನೂರು ಬಳಿಯ ಸಾಸಲಪುರ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಮಂಡ್ಯ ಜಿಲ್ಲೆಯ ಯೋಧ ಉಗ್ರರ ದಾಳಿಯಲ್ಲಿ ಹುತಾತ್ಮನಾಗಿರುವ ವಿಚಾರ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಆತನ ಸ್ವಗ್ರಾಮ ಗುಡಿಗೆರೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತನ ಸ್ನೇಹಿತರು ಮತ್ತು ಕುಟುಂಬದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಜಿಲ್ಲೆಯ ಹಲವೆಡೆ ಹುತಾತ್ಮ ಯೋಧನ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. 

18 ವರ್ಷಗಳಿಂದ
ಸಿಆರ್ ಪಿಎಫ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕದ ಮಂಡ್ಯದ ಗುಡಿಗೆರೆಯ ಯೋಧ ಹೆಚ್ ಗುರು
ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 

ಕಳೆದ 6 ತಿಂಗಳ
ಹಿಂದೆ ವಿವಾಹವಾಗಿದ್ದ ಯೋಧ ಗುರು, ರಜೆಗಾಗಿ ಕಳೆದ ವಾರ ಊರಿಗೆ ಬಂದಿದ್ದರು. ರಜೆ ಮುಗಿಸಿಕೊಂಡು
ವಾಪಸ್ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬೆನ್ನಲ್ಲೇ ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆಯ ಗುರು 2011 ರಲ್ಲಿ ಸಿಆರ್ ಪಿಎಫ್ ಗೆ
ಸೇರಿದ್ದರು.

ಮಂಡ್ಯ ಜಿಲ್ಲೆಯ ಗುಡಿಗೆರೆ ಗ್ರಾಮದ ವೀರ ಯೋಧ, ಹೆಚ್. ಗುರು ಇಂದು ದೇಶಕ್ಕಾಗಿ ಮತ್ತು ನಮ್ಮೆಲ್ಲರಿಗಾಗಿ ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.ಈ ಹುತಾತ್ಮ ಯೋಧನಿಗಾಗಿ ನಮ್ಮದೊಂದು ಕಂಬನಿ….

ಫ್ರೆಶ್ ನ್ಯೂಸ್

Latest Posts

Featured Videos