ಬೆಂಗಳೂರು, ಮೇ.15, ನ್ಯೂಸ್ ಎಕ್ಸ್ ಪ್ರೆಸ್ : ಮಾಜಿ ಸಿಎಂ ಜಗದೀಶ ಶೆಟ್ಟರ್ ‘ಟೈಂ ಬಾಂಬ್’ ಎಕ್ಸ್ಪರ್ಟ್’ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೈಂ ಬಾಂಬ್ ಇಟ್ಟಿದ್ದಾರೆ. ಈ ಬಾಂಬ್ ಮೇ 23ರ ಬಳಿಕ ಸ್ಫೋಟಗೊಳ್ಳಲಿದೆ ಎಂಬ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ರು. ಅವರ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಸಿದ್ದರಾಮಯ್ಯ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶೆಟ್ಟರ್ ಅವರನ್ನು ಒಂದು ವರ್ಷವೂ ಸಿಎಂ ಆಗಿರಲು ಸರಿಯಾಗಿ ಬಿಟ್ಟಿರಲಿಲ್ಲ. ಅವರೀಗ ಮೂಲೆ ಗುಂಪಾಗಿದ್ದಾರೆ. ಹಾಗಾಗಿ ಪಕ್ಷದಲ್ಲಿ ತಾವು ಇರುವುದನ್ನು ತೋರಿಸಿಕೊಳ್ಳಲು ಈ ರೀತಿ ಜೋಕುಗಳನ್ನು ಮಾಡುತ್ತಿರುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.