ಮುದ್ದೇಬಿಹಾಳ, ಜೂ. 24: ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಜಾಸ್ತಿಇರುವುದರಿಂದ ಸದ್ಯದಲ್ಲೆ 1 ಲಕ್ಷ ಪೊಲೀಸರನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಇಂದು ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದನ್ನು ನೀಗಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಆಯಕಟ್ಟಿನ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಪ್ರಗತಿಯಲ್ಲಿದೆ. ಸ್ಕೇರ್ ಸಿಟಿ ಯೋಜನೆಯಡಿ ಕಾರ್ಯಕ್ರಮ ಕೈಗೊಂಡಿದ್ದು, ರಾಜ್ಯದ ಮಂಗಳೂರು, ಧಾರವಾಡ, ಹುಬ್ಬಳ್ಳಿ, ಮೈಸೂರಿನಲ್ಲಿಯೂ ಈ ಯೋಜನೆಯಡಿ ಸೇರಿಸಲಾಗುವುದು ಎಂದು ಹೇಳಿದ್ದಾರೆ.
ಔರಾದ್ಕರ್ ಸಮಿತಿ ವರದಿಯ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು 15 ದಿನ ಕಾಲಾವಕಾಶ ನೀಡಿದ್ದು, ಇನ್ನೂ 8 -10 ದಿನಗಳಲ್ಲಿ ಪೊಲೀಸರಿಗೆ ಸಿಹಿಸುದ್ದಿ ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ.