ಬೆಳಗಾವಿ, ಜು.31: ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ತಾಲೂಕಿನ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಇನ್ನೂ ಮಳೆ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 31ಜುಲೈ ಮತ್ತು ಅಗಸ್ಟ್ 1ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಗೆ ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ನಿರಂತರ ವರುಣ ಆರ್ಭಟದಿಂದ ವಿಜಯಪುರದ ಆಲಮಟ್ಟಿ ಲಾಲಾಬಹದ್ದೂರ್ ಶಾಸ್ತ್ರಿ ಹಾಗೂ ರಾಯಚೂರಿನ ನಾರಾಯಣಪುರ ಜಲಾಶಯ ಕೂಡ ಭರ್ತಿಯಾಗಿವೆ. 63 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.