ಬೈಕ್ -ಟಿಪ್ಪರ್ ನಡುವೆ ಮುಖಾಮುಕಿ 2 ಸಾವು

ಬೈಕ್ -ಟಿಪ್ಪರ್ ನಡುವೆ ಮುಖಾಮುಕಿ 2 ಸಾವು

ಮಂಡ್ಯ, ಅ. 19: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ  ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ 2 ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪುರ ಗ್ರಾಮದ ಕೃಷ್ಣೇಗೌಡರ ಪತ್ನಿ ಸುಲೋಚನ(26) ಮತ್ತು ಮಂಡ್ಯದ ದುದ್ದ ಹೋಬಳಿ ಹೊನ್ನೇನಹಳ್ಳಿ ಗ್ರಾಮದ ಕುಮಾರ (26) ಎಂಬುವವರೇ ಮೃತ ದುರ್ದೈವಿಗಳು..

ಕೃಷ್ಣೇಗೌಡ ದಂಪತಿ ಮರಡಹಳ್ಳಿ ಗ್ರಾಮದಿಂದ ತಮ್ಮ ಊರಿಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕಿನ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದೆ,  ವೇಳೆ ಕೃಷ್ಣೇಗೌಡರ ಹಿಂದೆ ಕುಳಿತಿದ್ದ ಪತ್ನಿ ಸುಲೋಚನ ರಸ್ತೆಗೆ ಬಿದ್ದಾಗ ಹಿಂದೆ ಬರುತ್ತಿದ್ದ ಟಿಪ್ಪರ್ ಹರಿದು ಸುಲೋಚನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕಿನಲ್ಲಿದ್ದ ಕುಮಾರ ಎಂಬಾತನಿಗೆ ಗಂಭೀರ ಸ್ವರೂಪದ ಪೆಟ್ಟಾಗಿ ಮೈಸೂರಿಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos