2019 ಚುನಾವಣೆಯಲ್ಲಿ ಯಡಿಯೂರಪ್ಪ ಡ್ರಾಮಾ ಕಂಪನಿ ಕ್ಲೋಸ್ ಆಗಲಿದೆ : ರೇವಣ್ಣ

2019 ಚುನಾವಣೆಯಲ್ಲಿ ಯಡಿಯೂರಪ್ಪ ಡ್ರಾಮಾ ಕಂಪನಿ ಕ್ಲೋಸ್ ಆಗಲಿದೆ : ರೇವಣ್ಣ

ಹಾಸನ, . 12, ನ್ಯೂಸ್ ಎಕ್ಸ್ ಪ್ರೆಸ್: ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಪರವಾಗಿ ಹನುಮಂತಪುರದಲ್ಲಿ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ.ರೇವಣ್ಣ, ಯಡಿಯೂರಪ್ಪ ಅಂಡ್ ಡ್ರಾಮಾ ಕಂಪೆನಿ ಕರ್ನಾಟಕದಲ್ಲಿ ಈ ಬಾರಿ ಕ್ಲೋಸ್ ಆಗಲಿದೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಲಘುವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಏನಾಗಿದೆಯೋ ಗೊತ್ತಿಲ್ಲ. ಅವರಿಗೂ ಒಂದು ಒಳ್ಳೇ ನಿಂಬೆಹಣ್ಣು ಕೊಡೋಣ ಎಂದು ವ್ಯಂಗ್ಯವಾಡಿದರು.

ರಾಮಮಂದಿರದ ಹೆಸರಿನಲ್ಲಿ ಇಟ್ಟಿಗೆ ಸಂಗ್ರಹಿಸಿ ಯಾರ್ಯಾರು ಮನೆ ಕಟ್ಟಿಕೊಂಡರು ಎಂದು ಪ್ರಶ್ನಿಸಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಮೈತ್ರಿ ಅಭ್ಯರ್ಥಿ ಪರವಾದ ಒಲವು ಕಂಡು ಬರುತ್ತಿದೆ ಎಂದರು.

ಕಾಂಗ್ರೆಸ್ಗೆ ಟೋಪಿ ಹಾಕಿ ಹೋಗಿರುವ ವ್ಯಕ್ತಿಯಿಂದ ತಾವು ದಲಿತರ ಬಗ್ಗೆ ತಿಳಿಯಬೇಕಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ವಾಗ್ದಾಳಿ ನಡೆಸಿದರು. ಮತದಾರರು ಪ್ರಬುದ್ಧರಾಗಿದ್ದು, 2019 ಚುನಾವಣೆಯಲ್ಲಿ ಯಾರನ್ನು ಮನೆಗೆ ಕಳುಹಿಸಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos