ಅಮರಾವತಿ, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ದೇಶದಲ್ಲಿ ಲೋಕಸಭಾ ಚುನಾವಣೆ ಪರ್ವ ನಡೆಯುತ್ತಿದ್ದು, ಇದೇ ವೇಳೆ ಕೆಲವೆಡೆ ಮರು ಚುನಾವಣೆ ಘೊಷಣೆಯಾಗಿವೆ.
ಈಗಾಗಲೇ ಆಂಧ್ರ ಪ್ರದೇಶದಲ್ಲಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇಲ್ಲಿನ 5 ಬೂತ್ ಗಳಲ್ಲಿ ಮರು ಚುನಾವಣೆ ಘೋಷಣೆ ಮಾಡಲಾಗಿದೆ.
ಗುಂಟೂರು ಕ್ಷೇತ್ರ, ಓಂಗೋಲೆಯ ಪ್ರಕಾಶಂನಲ್ಲಿ, ನೆಲ್ಲೂರಿನ 5 ಬೂತ್ ಗಳಲ್ಲಿ ಚುನಾವಣೆ ನಡೆಯಲಿದೆ. ಏ. 11 ರಂದು ಆಂಧ್ರ ಪ್ರದೇಶದಲ್ಲಿ ಚುನಾವಣೆ ನಡೆದಿದ್ದು, ಉಪ ಚುನಾವಣೆ ಮೇ 6 ರಂದು ದಿನಾಂಕ ನಿಗದಿ ಮಾಡಲಾಗಿದೆ.
ಇವಿಎಂನಲ್ಲಿ ದೋಷ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಮರುಚುನಾವನೆ ನಡೆಸಲಾಗುತ್ತಿದೆ. ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.