ಬೆಂಗಳೂರು , ಸೆ. 24 : 3 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆ ಹಿನ್ನೆಲೆ ಅ.10ರಿಂದ 12 ರವರೆಗೆ ಮೂರುದಿನ ಚಳಿಗಾದ ಅಧಿವೇಶನ ನಡೆಯಲಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹತ್ತು ದಿನಗಳ ಬದಲಿಗೆ ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುತ್ತಿದೆ. ಅಧಿವೇಶನದಲ್ಲಿ ಪೂರಕ ಬಜೆಟ್ಗೆ ಮಾತ್ರ ಅನುಮೋದನೆ ನೀಡಲಾಗುವುದು. ಉಳಿದಂತೆ ಯಾವುದೇ ಘೋಷಣೆ ಇಲ್ಲ ಎಂದು ಹೇಳಿದರು.