ಬಸ್ ಆಟೋ ಅಪಘಾತ 4 ಸಾವು, ಖಾಕಿ ಮೇಲೆ ಹಲ್ಲೆ

ಬಸ್ ಆಟೋ ಅಪಘಾತ 4 ಸಾವು, ಖಾಕಿ ಮೇಲೆ ಹಲ್ಲೆ

ವಿಜಯಪುರ, ಅ. 2: ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಸರ್ಕಾರಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ಸರ್ಕಾರಿ ಬಸ್ಸಿಗೆ ಆಟೋ ಡಿಕ್ಕಿ ಹೊಡೆದು, ಮೂವರು ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಹೆಚ್ಚು ಜನರನ್ನು

ತುಂಬಿಕೊಂಡು ಬರು

ತ್ತಿದ್ದ ಆಟೋವನ್ನು ಟ್ರಾಫಿಕ್ ಪೊಲೀಸರು ಪರಿಶೀಲಿಸಲು ಮುಂದಾಗಿದ್ದು ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಎದುರಿಗೆ ಬರುತ್ತಿದ್ದ ಬಸ್ ಗೆ ಆಟೋ ಡಿಕ್ಕಿಯಾಗಿದೆ.  ಅಪಘಾತದ ಸ್ಥಳಕ್ಕೆ ಕೊಲ್ಹಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಇದರಿಂದ  ರೊಚ್ಚಿಗೆದ್ದ ಗ್ರಾಮಸ್ಥರು ಸರ್ಕಾರಿ ಬಸ್ ಗೆ ಡಿಕ್ಕಿಯಾಗಿದೆ ಎಂದು ಆರೋಪಿಸಿ ಪೊಲೀಸರನ್ನು ಅಟ್ಟಾಡಿಸಿಕೊಂಡು ಹೋಗಿ ಪಿಎಸ್​ಐ ಹಾಗೂ ಪೇದೆಗಳನ್ನು ಥಳಿಸಿದ್ದಾರೆ. ಪೋಲಿಸ್ ಜೀಪನ್ನ ಬೆಂಕಿ ಹಾಕಿ ಸುಡುವುದರ ಮೂಲಕ  ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಸದ್ಯಕ್ಕೆ ಗ್ರಾಮದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದ್ದು ಮೃತರ ಸಂಖ್ಯೆ 4ಕ್ಕೆ ಏರಿದೆ

ಫ್ರೆಶ್ ನ್ಯೂಸ್

Latest Posts

Featured Videos