ಇನ್ನೂ 4 ವರ್ಷ ಕುಮಾರಸ್ವಾಮಿಯೇ ಸಿಎಂ: ಪರಮೇಶ್ವರ್

ಇನ್ನೂ 4 ವರ್ಷ ಕುಮಾರಸ್ವಾಮಿಯೇ ಸಿಎಂ: ಪರಮೇಶ್ವರ್

ಬೆಂಗಳೂರು, ಮೇ. 24, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿದ್ದು, ಸಮ್ಮಿಶ್ರ ಸರಕಾರ ಅಭದ್ರವಾಗಿದೆ ಎಂಬ ಹೇಳಿಕೆಗಳು ವಿರೋಧ ಪಕ್ಷಗಳಿಂದ ಬರ್ತಿದೆ. ಸಮ್ಮಿಶ್ರ ಸರಕಾರ ಇನ್ನೂ 4 ವರ್ಷ ಮುಂದುವರಿಯುತ್ತದೆ. ಎಲ್ಲ ಶಾಸಕರೂ ನಮ್ಮ ಬೆಂಬಲಕ್ಕಿದ್ದಾರೆ. ರಾಜ್ಯದ ಜನತೆಗೆ ನಿರಾಶೆ ಮಾಡಲ್ಲ ಎಂದು ತೀರ್ಮಾನ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ಜನಾದೇಶ ಲೋಕಸಭೆಗೆ ಹೊರತು ಇದು ರಾಜ್ಯ ಸರಕಾರದ ಬಗ್ಗೆ ಅಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರಕಾರ ಬಿದ್ದು ಹೋಗುತ್ತದೆ ಎಂಬ ಪ್ರತಿಪಕ್ಷದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು.

ಲೋಕಸಭೆ ಚುನಾವಣೆ ಫಲಿತಾಂಶದ ಪರಾಮರ್ಶೆ ನಡೆಸಲು ಕರೆಯಲಾದ ಅನೌಪಚಾರಿಕ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ್ ಮಾತನಾಡಿದರು.

‘ನಮ್ಮ ಜತೆಗಿರುವ ಶಾಸಕರೆಲ್ಲರೂ ನಮ್ಮ ಜತೆಗೇ ಇದ್ದಾರೆ. ಬೇರೆ ಪಕ್ಷಗಳಿಗೆ ಹೋಗುವ ಚಿಂತನೆ ಮಾಡಿಲ್ಲ. ಹೀಗಾಗಿ ಸರಕಾರಕ್ಕೆ ಯಾವುದೇ ಅಭದ್ರತೆ ಎದುರಾಗಿಲ್ಲ’ ಎಂದು ಪರಮೇಶ್ವರ್ ಪ್ರತಿಪಾದಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos