ವಿಜಯಪುರ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಪ್ರಧಾನಿ ನರೇಂದ್ರ ಮೋದಿ ಭಾಷಣಗಳನ್ನು ಮಾಡುವ ಅವರು ರಾಜ್ಯಕ್ಕೆ 5 ವರ್ಷಗಳಲ್ಲಿ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ವಿಜಯಪುರದಲ್ಲಿ ನಡೆದ ಮೈತ್ರಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ ಮುಖ್ಯಮಂತ್ರಿ ಮೋದಿ ರಾಜ್ಯದಲ್ಲಿನ ಸಮಸ್ಯೆ ಪರಿಹಾರಕ್ಕೆ, ಅಭಿವೃದ್ಧಿಗೆ, ಯುವಕರಿಗೆ ಉದ್ಯೋಗ ಸೃಷ್ಟಿ, ಮಹಿಳೆಯರ ರಕ್ಷಣೆ ಕುರಿತು ಅವರ ಕೊಡುಗೆ ಏನೆಂಬುದರ ಬಗ್ಗೆ ಮಾತನಾಡಿಲ್ಲ. ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಬರಗಾಲದಿಂದ ನೀರಿನ ಕೊರತೆ ಇದೆ. ಆದರೆ ಈ ಕುರಿತಂತೆ ನರೇಗಾ ಯೋಜನೆಯಡಿ ಬಿಡಿಗಾಸನ್ನೂ ಕೂಡ ಮೋದಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.