ರಸ್ತೆ ದುರಸ್ತಿಗೆ 500 ಕೋಟಿ

ರಸ್ತೆ ದುರಸ್ತಿಗೆ 500 ಕೋಟಿ

ಹುಬ್ಬಳ್ಳಿ, ಆ. 31: ರಾಜ್ಯದಲ್ಲಿ ಕಳೆದ ಕೆಲ ದಿನಗಳ ಹಿಂದೆ ಭಾರಿ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ  ಪ್ರವಾಹ ಹಾಗು ಮಳೆ ಯಿಂದ ಹದಗೆಟ್ಟ ರಸ್ತೆಗಳ ದುರಸ್ತಿಗೆ ಸುಮಾರು 500 ಕೋಟಿ ರೂ. ಮೀಸಲಾಗಿದೆ ಎಂದು ಡಿಸಿಎಂ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಇಂದು ವಿಮಾನ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕೈಗೊಳ್ಳಲಾಗುವುದು. ಸಂಪರ್ಕ ರಸ್ತೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು. ಸೆ.7ರಂದು ರಾಜ್ಯಕ್ಕೆ ಪ್ರಧಾನಿ ಆಗಮಿಸಲಿದ್ದು, ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆದಿದ್ದಾರೆ. ಎರಡು ದಿನಗಳ ಬಾಗಲಕೋಟೆ ಪ್ರವಾಸ ನಂತರ ತಾವು ಮೈಸೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos