ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೆರೆರಾಜ್ಯ ಕೆರಳದಲ್ಲಿ ಕೊರೊನಾ ವೈರಸ್ ಪತ್ತೆ ಆಗಿರುವುದರಿಂದ ಕರ್ನಾಟಕ ರಾಜ್ಯದಲ್ಲೂ ಸಹ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ತಿಳಿಸಿದ್ದಾರೆ.
60 ವರ್ಷ ತುಂಬಿದವರು ಹೃದಯ ಸಂಬಂಧಿ ಸಮಸ್ಯೆ ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗ ಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು ಉಸಿರಾಟದ ತೊಂದರೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಕಡ್ಡಾಯಗೊಳಿಸಲಾಗುವುದು ಅನಗತ್ಯದ ಆತಂಕ ಬೇಡ ಎಂದು ಸಚಿವರು ಹೇಳಿದ್ದಾರೆ.