ಬೆಂಗಳೂರು, ಜ. 04: ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ, ಪ್ರಾಯೋಗಿಕವಾಗಿ ಈ ವರ್ಷ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಪರೀಕ್ಷಾ ವಿಧಾನದ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಕೆಲವೊಂದು ನಿಯಮಗಳನ್ನು ಸಡಿಲಿಸಿ ಪ್ರಸ್ತುತ ಸಾಲಿನಿಂದಲೇ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆ ಯಾವ ರೀತಿಯಲ್ಲಿರುತ್ತದೆ ಎಂಬ ರೂಪರೇಷೆಗಳನ್ನು ಇಂದು ಸಭೆ ನಡೆಸಿ ತಿಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಅನುತ್ತೀರ್ಣ ಮಾಡುವ ನಿಯಮಗಳು ಕೂಡ ಇಲ್ಲ. ಹೀಗಾಗಿ, ರಾಜ್ಯಮಟ್ಟದಲ್ಲಿಯೇ ಪರೀಕ್ಷೆ ನಡೆಯಲಿದೆ. ನಿಯಮಗಳನ್ನು ಮಾತ್ರ ತಿಳಿಸಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕಗೊಳ್ಳುವುದು ಬೇಡ. ಆರಾಮಾಗಿ ಪರೀಕ್ಷೆ ಎದುರಿಸಬಹುದು ಎಂದು ತಿಳಿಸಿದರು.