ಬೆಂಗಳೂರು: ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಹಿನ್ನೆಲೆ ಇದೀಗ ಇಸ್ರೇಲ್ನಲ್ಲಿದ್ದ ಭಾರತೀಯರು, ಆಪರೇಷನ್ ಅಜಯ್ ಮೂಲಕ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. 2 ನೇ ಬ್ಯಾಚ್ನ 12:40 ರ ಏರ್ ಇಂಡಿಯಾ ವಿಮಾನದಲ್ಲಿ 6 ಜನ ಪುರುಷರು ಹಾಗೂ 3 ಮಹಿಳೆಯರ ಸೇರಿದಂತೆ ಒಟ್ಟು 9 ಜನ ಕನ್ನಡಿಗರು ಆಗಮಿಸಿದ್ದಾರೆ. ಹೌದು, ದಕ್ಷಿಣ ಮೂರ್ತಿ, ಶಾಂತಮೂರ್ತಿ, ಉತ್ತಾಶ್ ದೇವನೂರು, ಸತೀಶ್ ಚಕ್ರಪಾಣಿ, ಶಿಲ್ಪ ಶ್ರೀ, ಸುಮತಿ, ಸೂರಜ್ ಕೃಷ್ಣ, ಪುಣ್ಯಕೋಟಿ ಮತ್ತು ಅಕ್ಷರ ಅವರು ಇಸ್ರೇಲ್ನಿಂದ ದೆಹಲಿಗೆ ಬಂದು, ಅಲ್ಲಿಂದ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಂದಿದ್ದಾರೆ. ಇವರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ತವರಿಗೆ ಕಳಿಸಲಿದ್ದಾರೆ.