ಜೈಪುರ; ಹೆಜ್ಜೇನು ದಾಳಿಗೆ ರೈತ ಬಲಿ

  • In Crime
  • March 29, 2019
  • 283 Views
ಜೈಪುರ; ಹೆಜ್ಜೇನು ದಾಳಿಗೆ ರೈತ ಬಲಿ

ಜೈಪುರ, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಸುಮಾರು 60ವರ್ಷದ ರೈತ ಹೆಜ್ಜೇನುಗಳ ದಾಳಿಯಿಂದ ಮೃತಪಟ್ಟಿರುವ ಘಟನೆ ರಾಜಸ್ಥಾನದ ಶಿರೋಹಿ ಜಿಲ್ಲೆಯ ಬರೇವಾಡನಲ್ಲಿ ನಡೆದಿದೆ. ರೈತ ಆಯಾಸದಿಂದ ಮರದಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ, ಅದೇ ಮರದಲ್ಲಿ ಹೆಜ್ಜೇನುಗಳು ಏಕಾಏಕಿ ಕೃಷಿಕನ ಮೇಲೆ ದಾಳಿ ಮಾಡಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಹೆಜ್ಜೇನು ದಾಳಿಯಿಂದ ರೈತ ಸ್ಥಳದಲೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ. ಇದನ್ನು ಕಂಡು ಸ್ಥಳೀಯರು ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾನೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos