ನವದೆಹಲಿ, ಏ. 8, ನ್ಯೂಸ್ ಎಕ್ಸ್ ಪ್ರೆಸ್: ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನುಇಂದು ಬಿಡುಗಡೆ ಮಾಡಿತು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ಗಣ್ಯರು ಪ್ರಣಾಳಿಕೆ ಬಿಡುಗಡೆಯ ವೇಳೆ ಉಪಸ್ಥಿತರಿರಲಿದ್ದಾರೆ.
ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದು, ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಮತದಾರನಿಗೆ ಯಾವೆಲ್ಲ ಭರವಸೆ ನೀಡಲಿದೆ ಎಂಬುದು ಇಂದು ತಿಳಿಯಲಿದೆ.