ನವದೆಹಲಿ, ಏ. 9, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ಪ್ರಣಾಳಿಕೆ ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ. ಬಿಜೆಪಿ ಪ್ರಣಾಳಿಕೆಯನ್ನು ಪ್ರತ್ಯೇಕ ವ್ಯಕ್ತಿಯ ಸೊಕ್ಕಿನ ಧ್ವನಿ ಎಂದ ರಾಹುಲ್ ‘ಮುಚ್ಚಿದ ಕೊಠಡಿಯಲ್ಲಿ ಓರ್ವ ವ್ಯಕ್ತಿಯ ಅಣತಿಯಂತೆ ಪ್ರಣಾಳಿಕೆ ರಚನೆ’. ಕಾಂಗ್ರೆಸ್ ಪ್ರಣಾಳಿಕೆ ಈ ದೇಶದ ಜನರ ಧ್ವನಿಯಾಗಿದೆ ಎಂದ ರಾಹುಲ್ ಗಾಂಧಿ. ಲೋಕಸಭೆ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಸಂಕಲ್ಪ ಪತ್ರ (ಪ್ರಣಾಳಿಕೆ)ವನ್ನು ‘ಓರ್ವ ವ್ಯಕ್ತಿಯ ಸೊಕ್ಕಿನ ಧ್ವನಿ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಣಾಳಿಕೆಯನ್ನು ಚರ್ಚೆಯ ಮೂಲಕ ತಯಾರಿಸಲಾಗಿದ್ದರೆ, ಬಿಜೆಪಿಯ ಪ್ರಣಾಳಿಕೆ ಮುಚ್ಚಿದ ಕೊಠಡಿಯಲ್ಲಿ ಓರ್ವ ವ್ಯಕ್ತಿಯ ಅಣತಿಯಂತೆ ರೂಪಿಸಲಾಗಿದೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪ್ರಣಾಳಿಕೆ ಅಲ್ಪದೃಷ್ಟಿ ಮತ್ತು ಸೊಕ್ಕಿನಿಂದ ಕೂಡಿದ್ದು, ಕಾಂಗ್ರೆಸ್ ಪ್ರಣಾಳಿಕೆ ಈ ದೇಶದ ಜನರ ಧ್ವನಿಯಾಗಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.