ಲಕ್ನೋ, ಜು. 13 : ದಲಿತ ಎಂಬ ಕಾರಣಕ್ಕೆ ಕ್ಯಾಂಪಸ್ನಲ್ಲಿರುವ ಶೌಚಾಲಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗೆ ಭದ್ರತಾ ಸಿಬ್ಬಂದಿ ತಡೆದಿರುವ ಘಟನೆ ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನ ಹೊಸ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಕಳೆದ ಐದು ದಿನಗಳಿಂದ ಮಹಿಳಾ ಮಹಾವಿದ್ಯಾಲಯದ ಆವರಣದ ಸಮೀಪವಿರುವ ಬಹುಜನ ಹೆಲ್ಪ್ ಡೆಸ್ಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಮಹಿಳಾ ಮಹಾವಿದ್ಯಾಲಯ ಹತ್ತಿರ ಶೌಚಾಲಯಕ್ಕೆ ಹೋಗಿದ್ದಾಳೆ. ಆಗ ಭದ್ರತಾ ಸಿಬ್ಬಂದಿ ತಡೆದು, ಇಲ್ಲಿ ಶೌಚಾಲಯಕ್ಕೆ ಹೋಗಲು ಅವಕಾಶವಿಲ್ಲ. ಹತ್ತಿರದಲ್ಲಿರುವ ಆಸ್ಪತ್ರೆ ಅಥವಾ ಕಾಲೇಜು ಕ್ಯಾಂಪಸ್ನಲ್ಲಿರುವ ಶೌಚಾಲಯಕ್ಕೆ ತೆರಳುವಂತೆ ಸೂಚಿಸಿದ್ದಾರೆ.