ಸರ್ಕಾರದಿಂದ ಬಡವರಿಗೆ ಬಂಪರ್ ಗಿಪ್ಟ್

ಸರ್ಕಾರದಿಂದ ಬಡವರಿಗೆ ಬಂಪರ್ ಗಿಪ್ಟ್

ಬೆಂಗಳೂರು, ಅ. 15 : ಉಚಿತ ಸಾಮೂಹಿಕ ವಿವಾಹ ಯೋಜನೆ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ. ಇದೇ ಮೊದಲನೆ ಬಾರಿಗೆ ಬಿಜೆಪಿ ಸರ್ಕಾರದಿಂದ ಬಡವರಿಗೆ ಬಂಪರ್ ಗಿಷ್ಟ್ ಸಿಕ್ಕಾಂತಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಮುಜರಾಯಿ ಇಲಾಖೆ ಎ ದರ್ಜೆ 100 ದೇವಾಲಯಗಳಲ್ಲಿ ಪ್ರತಿ ವರ್ಷ ಒಂದೊಂದು ದೇವಾಲಯದಲ್ಲಿ 100 ಜೋಡಿಗೆ ಮದುವೆ ಮಾಡಿಸುವ ಗುರಿ. ಪ್ರತಿ ವರ್ಷ 10 ಸಾವಿರ ಜೋಡಿಗೆ ಮದುವೆ ಮಾಡಿಸುವ ಯೋಜನೆ ಇದಾಗಿದೆ. ಯಾವುದೇ ಜಾತಿ-ಭೇದವಿಲ್ಲದೆ, ಎಲ್ಲಾ ವರ್ಗದ ಬಡವರಿಗಾಗಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ಹಿಂದು ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಒಂದು ಜೋಡಿಗೆ 25-30 ಸಾವಿರ ಖರ್ಚಾಗಲಿದ್ದು, ಪ್ರತಿ ವರ್ಷ 25-30 ಕೋಟಿ ರೂ. ಈ ಯೋಜನೆಗೆ ಖರ್ಚಾಗಲಿದೆ. ಹಾಗೆಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ನೀಡಲಿದೆ. ಚಾಮುಂಡೇಶ್ವರಿ, ಕಟೀಲು ದುರ್ಗೆ, ನಂಜನಗೂಡು ನಂಜುಂಡೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸೇರಿದಂತೆ ಮುಂದಿನ ದಿನಗಳಲ್ಲಿ ಇನ್ಫೋಸಿಸ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳನ್ನು ಭಾಗಿಯಾಗಿಸಿಕೊಂಡು ಯೋಜನೆ ಮುಂದುವರಿಸಲು ಇಲಾಖೆ ತೀರ್ಮಾನ ಮಾಡಿದೆ.

ಫ್ರೆಶ್ ನ್ಯೂಸ್

Latest Posts

Featured Videos