ನವದೆಹಲಿ, ಅ. 24 : ದೇಶದ ಆರ್ಥಿಕ ಕುಸಿತ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬ್ಯಾಂಕಿಂಗ್ ವ್ಯವಸ್ಥೆ ಕುಂಟಿತ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟಿಸಲು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.
ನ.5 ರಿಂದ 15ರ ವರೆಗೆ 10 ದಿನಗಳ ಕಾಲ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ . ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನ.5ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.