ಬೆಂಗಳೂರು: ಪತ್ರಿಕೋದ್ಯಮ
ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊತ್ತನೂರಿನ
ಕೆ.ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
4ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಮುಂಬೈ ಮೂಲದ ಸೋಫಿಯಾ ದಮನಿ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಈಕೆ ಕಳೆದ 1 ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಳು. ನಿನ್ನೆ ಬೆಳಗ್ಗೆ ಸಹಪಾಠಿಗಳ ಜೊತೆ ಮಾತಾನಾಡಿದ್ದ ಸೋಫಿಯಾ, ನೀವು ಕಾಲೇಜಿಗೆ ಹೋಗಿ, ನಾನು ಬರೋದಿಲ್ಲ ಎಂದಿದ್ದಳಂತೆ. ಸಂಜೆ ಸಹಪಾಠಿಗಳು ಹಾಸ್ಟೆಲ್ಗೆ ವಾಪಸ್ ಬಂದಾಗ ಹಾಸ್ಟೆಲ್ನ ತನ್ನ ಕೋಣೆಯ ಬೆಡ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾಳೆ.
ಮೃತದೇಹ ಕಂಡು ಅಲ್ಲಿನ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ಗೆ ತಿಳಿಸಿದ್ದರು. ಇನ್ನು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣದಡಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮುಂಬೈಯಿಂದ ಸೋಫಿಯಾ ಪೋಷಕರು ಬರಬೇಕಿದೆ. ಈ ಸಾವು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಡಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನನಿಸಲಾಗಿದೆ.