ಚಿಕ್ಕಮಗಳೂರು, ಡಿ.17 : ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐದು ಬೈಕ್ಗಳಿಗೆ ಬೆಂಕಿ ಹಚ್ಚಿದ ನಂತರ ಆತಂಕದ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪೆನ್ಷನ್ ಮೊಹಲ್ಲಾ, ಮಾರ್ಕೆಟ್ ರಸ್ತೆ ಮತ್ತು ಗೌರಿ ಕಾಲೋನಿಯಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಘಟನೆಯ ನಂತರ, ಪೊಲೀಸರು ಗಸ್ತು ತಿರುಗಿದ್ದು, ಎಸ್ಪಿ ಹರೀಶ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿದರು. ಮೂರು ಕಡೆಯೂ ಒಬ್ಬನೇ ವ್ಯಕ್ತಿಯಿಂದ ಕಿಡಿಗೇಡಿತನ ನಡೆದಿರುವಂತೆ ಕಾಣುತ್ತಿದೆ ಎಂದು ಪಾಂಡೆ ಹೇಳಿದರು.