ನವದೆಹಲಿ, ಮಾ. 30: ದೇಶದಾದ್ಯಂತ ಮಹಾಮಾರಿ ಕಾಯಿಲೆಯು ಎಲ್ಲಿಲ್ಲದ ತಲ್ಲಣವಾಡುತ್ತಿದೆ. ಇದರಿಂದ 21 ದಿನ ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಘೋಷಿಸಲಾಗಿತ್ತು. ಆದರೆ ಇತ್ತೀಚಿಗೆ ಏ. 14ರ ನಂತರವೂ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ಗಾಳಿಸುದ್ದಿಗಳು ಹರಿದಾಡುತ್ತಿದೆ.
ಹೌದು, ದೇಶಾದ್ಯಂತದ ಏ, 14ರ ನಂತರವು ಲಾಕ್ ಡೌನ್ ಮತ್ತೆ ಮುಂದುವರೆಯಲಿದೆ ಎಂದು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಏ. 14ರ ನಂತರದ ಲಾಕ್ ಡೌನ್ ಮುಕ್ತಾಯವಾಗಲಿದೆ. ಲಾಕ್ ಡೌನ್ ವಿಸ್ತರಣೆಯ ಯಾವುದೇ ಉದ್ದೇಶ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬ, ನನಗೆ ದೇಶಾದ್ಯಂತ ಏ. 14ರ ನಂತರವೂ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬ ವರದಿ ಕೇಳಿ ಅಚ್ಚರಿಯಾಯಿತು. ಆದರೆ ಇದು ಸತ್ಯಕ್ಕೆ ದೂರವಾದ ಮಾತಾಗಿದೆ. ಇಂತಹ ಯಾವುದೇ ನಿರ್ಧಾರ ಸರ್ಕಾರದ ಮುಂದೆ ಇಲ್ಲ. ಏ.14ಕ್ಕೆ ದೇಶಾದ್ಯಂತ ಲಾಕ್ ಡೌನ್ ಕೊನೆಗೊಳ್ಳಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.