ಗೂಂಡಾಗಳ ಗುಂಡಿಗೆ ಪೊಲೀಸರು ಬಲಿ

ಗೂಂಡಾಗಳ ಗುಂಡಿಗೆ ಪೊಲೀಸರು ಬಲಿ

ಬೆಂಗಳೂರು (ಜೂ. 3): ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ರೌಡಿಗಳ ಗುಂಡಿನ ದಾಳಿಯಿಂದ ಉ. ಪ್ರ. 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 12 ಪೊಲೀಸರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ದುಬೆ ವಿರುದ್ಧ 60 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos