ಶಾಸಕ ಎಂ.ಸತೀಶ್ ರೆಡ್ಡಿ ಅವರಿಗೆ ಪಿತೃ ವಿಯೋಗ

  • In Metro
  • July 25, 2020
  • 281 Views
ಶಾಸಕ ಎಂ.ಸತೀಶ್ ರೆಡ್ಡಿ ಅವರಿಗೆ ಪಿತೃ ವಿಯೋಗ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಶಾಸಕ ಎಂ. ಸತೀಶ್ ರೆಡ್ಡಿ ಅವರ ತಂದೆ ಮುನಿರೆಡ್ಡಿ ಅಲಿಯಾಸ್ ಪಂಚೆ ಮುನಿರೆಡ್ಡಿ (80). ಶನಿವಾರ ಸಂಜೆ ವಿಧಿವಶರಾಗಿದ್ದಾರೆ.

ಮುನಿರೆಡ್ಡಿ ಅವರು ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ ಸಾಗರ ಅಪೋಲೋ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಮುನಿರೆಡ್ಡಿ ಅವರು ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಶಾಸಕ ಸತೀಶ್ ರೆಡ್ಡಿ ಅವರನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರವು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೂಡ್ಲೂಗೇಟ್ ಹೊಸಪಾಳ್ಯದಲ್ಲಿರುವ ಬಿಬಿಎಂಪಿಯ ವಿದ್ಯುತ್ ಚಿತಾಗಾರದಲ್ಲಿ ಧರ್ಮಪತ್ನಿ, ಮಕ್ಕಳು ಇನ್ನಿತರ ಕುಟುಂಬ ಸದಸ್ಯರೊಂದಿಗೆ ನೆರವೇರಿಸಲಾಯಿತು.

ಸ್ಥಳೀಯ ಪಾಲಿಕೆ ಸದಸ್ಯರುಗಳು, ಉಪಮಹಾಪೌರರು ರಾಮ್ ಮೋಹನ್ ರಾಜ್, ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ ಸೇರಿದಂತೆ ಹಲವಾರು ಗಣ್ಯರು ಸತೀಶ್ ರೆಡ್ಡಿ ಅವರಿಗೆ ಸಾಂತ್ವನ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos