ಜಿನಾಕು ಪ್ರಶಸ್ತಿ ಪ್ರದಾನ

ಜಿನಾಕು ಪ್ರಶಸ್ತಿ ಪ್ರದಾನ

ಬೆಂಗಳೂರು :ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿ ವತಿಯಿಂದ ಜಿ.ನಾರಾಯಣಕುಮಾರ್ ಸಂಸ್ಮರಣೆ ಹಾಗೂ “ಜಿನಾಕು ಪ್ರಶಸ್ತಿ ಪ್ರದಾನ ಸಮಾರಂಭ ವನ್ನು ಶನಿವಾರ ಚಿತ್ರ ಕಲಾ ಪರಿಷತ್‍ನಲ್ಲಿ ಹಮ್ಮಿಕೊಳ್ಳಲಾಯಿತ್ತು.
ಈ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರ ಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು. ವಸತಿ ಸಚಿವ ವಿ ಸೋಮಣ್ಣ ಪ್ರಶಸ್ತಿ ಪ್ರದಾನ ನೇರವೇರಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪೋಲೀಸ್ ಮಹಾ ನಿರ್ದೇಶಕ ಡಾ.ಶಂಕರ ಎಂ.ಬಿದರಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ರವರು ಭಾಗವಹಿಸಿದರು.
ಸದರಿ ಕಾರ್ಯಕ್ರಮದಲ್ಲಿ ಜಿನಾಕು ಪ್ರಶಸ್ತಿಯ ಪುರಸ್ಕøತರು : ನಟಿ ತಾರಾ ಅನುರಾಧ, ಕರ್ನಾಟಕ ಜನಪದ ಅಕಾಡೆಮಿ ಮಾಜಿ ಅಧ್ಯಕ್ಷ ಬಾನಂದೂರು ಕೆಂಪಯ್ಯ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ, ವಿಮರ್ಶಕರು ಜಿ. ಅಬ್ದುಲ್ ಬಷೀರ್, ಬೆಂಗಳೂರು ಪ್ರೆಸ್‍ಕ್ಲಬ್ ಮಾಜಿ ಕಾರ್ಯದರ್ಶಿ ವೈ.ಜಿ ಅಶೋಕ್ ಕುಮಾರ್ ಭಾಜನರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos