ಅರ್ಜುನನ ಮುಂದೆ ಮಾವುತನ ಗೋಳಾಟ!

ಅರ್ಜುನನ ಮುಂದೆ ಮಾವುತನ ಗೋಳಾಟ!

ಹಾಸನ: ಎಂಟು ಬಾರಿ ಮೈಸೂರು ದಸರಾ ಚಿನ್ನದ ಅಂಬಾರಿ ಹೊತ್ತಿದ್ದ ಮಾಜಿ ಕ್ಯಾಪ್ಟನ್​ ಅರ್ಜನ ಆನೆ ಕಾಡಾನೆಯ ಕಾರ್ಯಾಚರಣೆಯಲ್ಲಿ ವೇಳೆ ಒಂಟಿಸಲಗದ ಜೊತೆ ಕಾದಾಟ ನಡೆಸಿ ವೀರಮರಣವನ್ನಪ್ಪಿದ್ದಾನೆ.

ನಿನ್ನೆ ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನ ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ. ಅಂತಿಮ ದರ್ಶನದ ವೇಳೆ ಮಾವುತ ವಿನು  ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ.  ಇಲ್ಲದಿದ್ದರೇ ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ವಿನು ಅವರು ಅರ್ಜುನನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಇದೀಗ ಅರ್ಜುನನ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದೆ ರೋಧಿಸುತ್ತಿದ್ದಾರೆ. ಮಂಗಳವಾರ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚೇತರಿಸಿಕೊಂಡು ಬಂದಿದ್ದ ವಿನು ಅವರು ತನ್ನ ಪ್ರೀತಿಯ ಅರ್ಜುನನ್ನು ಕಂಡು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos