ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಳ್ಳಂಬೆಳಗ್ಗೆ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗಿದ್ದು ಮೆಟ್ರೋ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪರದಾಡಿದ್ದಾರೆ.
ಬೈಯಪ್ಪನಹಳ್ಳಿಯಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯಕ್ತಿಯವಾಗಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಿಗೆ ಬಾರಿ ಸಮಸ್ಯೆಯಾಗಿದೆ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನ ದಟ್ಟಣೆ ಉಂಟಾಗಿದೆ.
ಮೆಟ್ರೋ ನಿಲ್ದಾಣದಲ್ಲಿಯೇ ನಿಲ್ಲಬೇಕಾದ ಸ್ಥಿತಿಯಿಂದಾಗಿ ಸಾವಿರಾರು ಜನರು ಕಚೇರಿಗೆ ತೆರಳಲು ತಡವಾಗಿ ಪರದಾಡಿದ್ದಾರೆ. ಈ ನಡುವೆ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು ಆದಷ್ಟು ಬೇಗ ಸಮಸ್ಯೆ ಸರಿಪಡಿಸುವುದಾಗಿ ಬಿ ಎಂ ಆರ್ ಸಿ ಎಲ್ ತಿಳಿಸಿದೆ.
ಮೆಟ್ರೋ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದ್ದು ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನ ದಟ್ಟಣೆ ಉಂಟಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆಂದ ಬಿಎಂಆರ್ಸಿಎಲ್ ತಿಳಿಸಿದೆ.
ಇದರಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆಯಾಗುತ್ತದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ನಮ್ಮ ತಂಡಗಳು ಕೆಲಸ ಮಾಡುತ್ತಿವೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದ ಟ್ವೀಟ್ ಮಾಡಿದೆ.