ತುಮಕೂರು: ಕನ್ನಡದ ಬಿಗ್ ಬಾಸ್ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಫಘಾತಕ್ಕೀಡಾಗಿತ್ತು.
ಬಿಗ್ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋಚಾಲಕ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ತುಕಾಲಿ ಸಂತೋಷ್ ಕೆಲ ದಿನಗಳ ಹಿಂದೆ ಕಿಯಾ ಕಂಪನಿಯ ಹೊಸ ಕಾರು ಖರೀದಿಸಿದ್ದರು. ಆದರೆ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಕಳೆದ ದಿನ ರಾತ್ರಿ ಆಟೋ ಡಿಕ್ಕಿ ಹೊಡೆದಿದ್ದು ಕಾರೂ ಹಾಗೂ ಆಟೋ ಜಖಂಗೊಂಡಿತ್ತು.
ಅಪಘಾತದಲ್ಲಿ ಆಟೋ ಚಾಲಕ ಜಗದೀಶ್ಗೆ ತೀವ್ರ ಗಾಯಗಳಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಅವರಿಗೆ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿದ್ದಾರೆ.