ತುಮಕೂರು: ತುಮಕೂರು ಕಳೆದ 40 ವರ್ಷಗಳಿಂದ ಒಡನಾಟ ಇಟ್ಟುಕೊಂಡಿದ್ದೇನೆ. ತುಮಕೂರು ನನ್ನ ತಾಯಿನಾಡಿನಷ್ಟೇ ಪವಿತ್ರವಾದದ್ದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಜತೆಗೆ ಕೈಜೋಡಿಸಿ ಎಲ್ಲ ಕಡೆ ಕೆಲಸ ಮಾಡುತ್ತಿದ್ದಾರೆ.
ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಆಗಬೇಕು. ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾದ ಅಲೆಯಿದೆ. ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಶಂಕರ್, ವೈ.ಎಚ್.ಹುಚಯ್ಯ, ಶಿವಕುಮಾರ್, ಸಿದ್ದೇಗೌಡ, ಪಂಚೆ ರಾಮಚಂದ್ರಪ್ಪ, ನರಸಿಂಹಮೂರ್ತಿ, ಉಮೇಶ್ಗೌಡ, ಅಂಜಿನಪ್ಪ, ಸುಮಿತ್ರಾದೇವಿ, ರೇಣುಕಮ್ಮ ಇತರರು ಹಾಜರಿದ್ದರು.