ಬೆಂಗಳುರು, ಮಾ. 12, ನ್ಯೂಸ್ ಎಕ್ಸ್ ಪ್ರೆಸ್: ರೈತರ ಸಾಲಮನ್ನಾ ಪ್ರಮಾಣಪತ್ರಗಳು ಇಂದು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಮಂಡೂರು ಗ್ರಾಮದಲ್ಲಿ ನಡೆದಿದೆ.
ಇನ್ನು ಕಸದ ತೊಟ್ಟಿಯಲ್ಲಿ ಆಧಾರ್ ಕಾರ್ಡ್ , ಪಾಸ್ ಬುಕ್ ಕೂಡ ಕಸದ ತೊಟ್ಟಿಯಲ್ಲಿ ಬಿದ್ದಿದ್ದು ಇದನ್ನು ನೋಡಿದ ರೈತರು ಅಂಚೆಕಚೇರಿ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದು, ಸಬಂಧಪಟ್ಟಂವರ ವಿರುದ್ದ ಕಾನೂನು ಕ್ರಮ ಕೈಗೊಂಡು, ಪಾಸ್ ಬುಕ್ ಗಳನ್ನು , ಸಾಲಪ್ರಮಾಣಪತ್ರಗಳನ್ನು ಸಂಬಂಧಪಟ್ಟವರಿಗೆ ತಲುಪಿಸಿ ಅಂತ ಊರಿನ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.