ಏ.10ರಂದು ಮೈಸೂರಿನ ಬಿಎಸ್ಪಿ ಮಹಾ ಸಮಾವೇಶಕ್ಕೆ ಮಾಯಾವತಿ

ಏ.10ರಂದು ಮೈಸೂರಿನ ಬಿಎಸ್ಪಿ ಮಹಾ ಸಮಾವೇಶಕ್ಕೆ ಮಾಯಾವತಿ

ಮೈಸೂರು, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಕೇವಲ 5 ದಿನಗಳು ಕಳೆದಿದೆ. ಇದಕ್ಕೆ ಪುಷ್ಟಿಕೊಡುವಂತೆ ರಾಜಕೀಯ ಚಟುವಟಿಕೆಗಳು ಸಹ ಚುರುಕುಗೊಂಡಿವೆ. ಇತ್ತ ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸಿ ಫೈನಲ್ ಹಂತಕ್ಕೆ ತಲುಪಿವೆ.

ಈ ನಡುವೆ ಬಿಎಸ್ ಪಿ ಸಹ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದು, ಏಪ್ರಿಲ್ 10 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಮರಕ್ಕೆ ಮಾಯಾವತಿ ನೇತೃತ್ವದ ಬಿಎಸ್ ಪಿ ಸಿದ್ಧತೆ ನಡೆಸುತ್ತಿದ್ದು, ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ಹಾಗೂ ಬಿಎಸ್ ಪಿ ಶಾಸಕ ಎನ್ ಮಹೇಶ್ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಸಮಾವೇಶ ನಿಮಿತ್ತ ಮೈಸೂರಿಗೆ ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ಆಗಮಿಸಲಿದ್ದು, ಅಂದು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

ಸಮಾವೇಶಕ್ಕೆ ಯುಪಿ ಸಂಸದರು, ಮಾಜಿ ಸಚಿವರುಗಳು ಸೇರಿದಂತೆ ರಾಜ್ಯ ಬಿಎಸ್ಪಿ ನಾಯಕರು ಕೂಡ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷದ ವರ್ಚಸ್ಸು ತೋರಿಸಲು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮುಂದಾಗಿದ್ದು, ಸಮಾವೇಶಕ್ಕೆ 1ಲಕ್ಷ ಮಂದಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos