ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಕರೆ

ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಕರೆ

ನೆಲಮಂಗಲ: ಕನ್ನಡಪರ ಸಂಘಟನೆಗಳು ಕನ್ನಡದ ಉಳಿವಿಗಾಗಿ ಶ್ರಮಿಸುತ್ತಿವೆ. ಕೊರೋನಾ ಸಂದರ್ಭದಲ್ಲಿ ಸಾಕಷ್ಟು ಕುಟುಂಬಗಳು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಪರದಾಡುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷೆ, ನೆಲ ಜಲದ ಸಂರಕ್ಷಣೆಗಾಗಿ ಕರುನಾಡ ವಿಜಯ ಸೇನೆ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ವನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠದ ಡಾ ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳನ್ನು ಪುನಶ್ಚೇತನಗೊಳಿಸುವ ಸಲುವಾಗಿ ಕರುನಾಡ ವಿಜಯ ಸೇನೆ ಸಂಘಟನೆ ಸರ್ಕಾರಿ ಶಾಲಾ ಕಟ್ಟಡಗಳಿಗೆ ಸುಣ್ಣ ಬಣ್ಣಗಳನ್ನು ಹಚ್ಚುವ ಮೂಲಕ ನವೀಕರಣಕ್ಕೆ ಮುಂದಾಗಿದ್ದು ವನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠದ ಡಾ ಶ್ರೀ ಬಸವ ರಮಾನಂದ ಸ್ವಾಮೀಜಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿ, ಹಬ್ಬ ಹರಿದಿನ ಸಮಾರಂಭಗಳು ಬಂತೆಂದರೆ ಕೆಲ ಸಂಘಟನೆಗಳು ಮನರಂಜನಾ ಕಾರ್ಯಕ್ರಮಗಳ ಮೂಲಕ ಸಾಕಷ್ಟು ಹಣವನ್ನು ದುಂದುವೆಚ್ಚ ಮಾಡುವ ಬದಲು ಇಂತಹ ಉತ್ತಮ ಕಾರ್ಯಗಳಿಗೆ ಮುಂದಾದರೆ ಮುಂದೊಂದು ದಿನ ನಮ್ಮ ಕರುನಾಡು ಕನ್ನಡಿಗರ ಅಭಿಮಾನದಿಂದ ಮತ್ತಷ್ಟು ಸದೃಢಗೊಳ್ಳುವು ದರಲ್ಲಿ ಎರಡು ಮಾತಿಲ್ಲ ಎಂದರು.
ಕರುನಾಡ ವಿಜಯ ಸೇನೆಯ ರಾಜ್ಯಾಧ್ಯಕ್ಷ ಎಚ್‌ಎನ್ ದೀಪಕ್ ಮಾತನಾಡಿ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಸುಣ್ಣಬಣ್ಣ ಹಚ್ಚುವ ಮೂಲಕ ಸುಮಾರು ೫೦೦ಕ್ಕೂ ಹೆಚ್ಚು ಶಾಲೆಗಳ ಪುನಶ್ಚೇತನಕ್ಕೆ ಮುಂದಾಗಿದ್ದೇವೆ. ೨೦೨೦ ನೇ ನವೆಂಬರ್ ತಿಂಗಳಿನ ಕನ್ನಡ ರಾಜ್ಯೋತ್ಸವದಿಂದ ಹಿಡಿದು ೨೦೨೧ ನೇ ನವೆಂಬರ್ ತಿಂಗಳ ವೇಳೆಗೆ ಸುಮಾರು ೫೦೦ ಸರ್ಕಾರಿ ಶಾಲೆಗಳನ್ನು ಪುನಶ್ಚೇತನ ಗೊಳಿಸಲಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos