ಡಿಕೆಶಿಗೆ ಹೈಕಮಾಂಡ್ ನಿಂದ  ಕರೆ

ಡಿಕೆಶಿಗೆ ಹೈಕಮಾಂಡ್ ನಿಂದ  ಕರೆ

ಬೆಂಗಳೂರು, ಡಿ. 11: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹೈಕಮಾಂಡ್ ಡಿಕೆಶಿಗೆ ಬುಲಾವ್ ನೀಡಿದ್ದು ರಾಜ್ಯ ಕಾಂಗ್ರೆಸ್ಸಿನಲ್ಲಿ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿರುವ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ಆ ಸ್ಥಾನಮಾನ ಬೇಡ ಎಂದು ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದರು. ಆದರೆ ಪಟ್ಟು ಬಿಡದ ಹೈಕಮಾಂಡ್ ಡಿಕೆಶಿಗೆ ಬುಲಾವ್ ನೀಡಿದ್ದು ಡಿಕೆಶಿ ದೆಹಲಿಯ ವಿಮಾನ ಹತ್ತಲಿದ್ದಾರೆ.

ಪಟ್ಟಾಭಿಷೇಕಕ್ಕೆ ಡಿಕೆಶಿ ಮನವೊಲಿಕೆಗೆ ಹೈಕಮಾಂಡ್ ಮುಂದಾಗಿದ್ದು ಕೆಪಿಸಿಸಿ ಪಟ್ಟಕ್ಕೆ ಡಿಕೆಶಿ ಹೆಸರು ಬಹುತೇಕ ಅಂತಿಮ ಪಡಿಸುವ ತೀರ್ಮಾನಕ್ಕೆ ಬಂದಿದೆ. ಆದರೆ ಈ ಸಂದರ್ಭದಲ್ಲಿ ಕೆಪಿಸಿಸಿ ಪಟ್ಟಕ್ಕೇರಲು ಡಿಕೆಶಿ ಒಪ್ಪಿಕೊಳ್ಳುತ್ತಾರಾ? ಹೈ ಕಮಾಂಡ್ ಮನವೊಲಿಕೆ ಮಾಡಿ ಪಟ್ಟಾಭಿಷೇಕ ಮಾಡುತ್ತಾ ಎನ್ನುವ ಕುತೂಹಲ ಮೂಡಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos