ಸುಳ್ಯ, ಅ. 18: ಸುಳ್ಯದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಮಾವಿನ ಕಟ್ಟೆ ಬಳಿ ಢಿಕ್ಕಿ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಏಳು ಜೀವ ಬಲಿ ಪಡೆದುಕೊಂಡಿರುವ ಮೈಸೂರು ರಾಷ್ಟ್ರೀಯ ಹೆದ್ದಾರಿ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ನಿನ್ನೆ ರಾತ್ರಿ ವಾಹನ ಅಫಘಾತ ನಡೆದಿದೆ. ಕಾರು ಸಂಪೂರ್ಣ ನುಚ್ಚುನೂರಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.