ಹಾಸನ: ಪತ್ನಿ ಕೊಂದು ಆಕ್ಸಿಡೆಂಟ್ ಎಂದು ಬಿಂಬಿಸಲು ಹೊರಟಿದ್ದ ಪತಿಯನ್ನು ಅರಕಲಗೂಡು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಅರಕಲಗೂಡು ತಾಲೂಕಿನ ಹುಲಿಕಲ್ ನಿವಾಸಿ ಮಹೇಶ್ ಬಂಧಿತ ಆರೋಪಿ. ಮೂರು ವರ್ಷಗಳ ಹಿಂದೆ ಪ್ರೀತಿಯನ್ನು ವಿವಾಹವಾಗಿದ್ದು. ಬುಧವಾರ ಗಂಡ-ಹೆಂಡತಿ ನಡುವೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿದ್ದು, ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಕರಿಗೆಕರೆ ಮಾಡಿ, ಬೈಕ್ ಅಪಘಾತವಾಗಿದೆ. ಪ್ರೀತಿ ಮೃತಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾನೆ.
ಅಪಘಾತ ಸ್ಥಳ ಪರಿಶೀಲಿಸಿದ ಬಳಿಕ ಅನುಮಾನಗೊಂಡ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ.