ಮೈಸೂರು: ಬೆಳಕಿನ ಹಬ್ಬದ ದಿನವೇ ಪತ್ನಿಯನ್ನು ಕೊಂದು ಬೆಂಕಿ ಹಚ್ಚಿ ಗ್ರಾ.ಪಂ ಸದಸ್ಯನೊಬ್ಬ ಕೊಂದ ಭೀಕರ ಘಟನೆ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ನಡೆದಿದೆ.
ರಮೇಶ್ (೩೦) ಪತ್ನಿಯನ್ನು ಕೊಲೆಗೈದಿರುವ ಆರೋಪಿ. ಈತ ಪತ್ನಿ ಶಾಂತಮ್ಮ (೨೨) ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆ.
ಈ ದಂಪತಿಗೆ ಮಕ್ಕಳು ಇರಲಿಲ್ಲ. ಆತ ಅಂಕನಹಳ್ಳಿ ಗ್ರಾ.ಪಂ ಮಾಜಿ ಸದಸ್ಯನೂ ಆಗಿದ್ದ. ರಾಜಕೀಯ ಹುಚ್ಚು ಹೆಚ್ಚಾಗಿದ್ದ ಹಿನ್ನಲೆಯಲ್ಲಿ ಮುಂಬರುವ ಗ್ರಾ.ಪಂ ಮತ್ತೆ ಸ್ರ್ಧಿಸಬೇಕು ಎಂಬ ಉದ್ದೇಶದಿಂದ ತನ್ನ ಹೆಂಡತಿ ಶಾಂತಮ್ಮ ಅವರಿಗೆ ತವರು ಮನೆಯಿಂದ ಹಣ ತರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಂತಿಮವಾಗಿ ಮನೆಯಲ್ಲಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೃತೆಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದು, ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗೆ ಪತ್ತೆ ಕರ್ಯ ಆರಂಭಿಸಿರುವ ಪೊಲೀಸರು, ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.