ಹಾಸನ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಇಂದು ಹಾಸನದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಅವರ ಪರ ಪ್ರಚಾರ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಲಿರುವ ಎಸ್.ಎಂ.ಕೃಷ್ಣ, ಬೆಳಿಗ್ಗೆ 10:30ಕ್ಕೆ ಹಾಸನದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಳಿಕ 12 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ನಂತರ ಚನ್ನರಾಯಪಟ್ಟಣದಲ್ಲಿ ಎ.ಮಂಜು ಪರ ರೋಡ್ ಶೋ ನಡೆಸಲಿದ್ದಾರೆ. ಎಸ್.ಎಂ.ಕೃಷ್ಣಗೆ ಎ.ಮಂಜು, ಶಾಸಕರಾದ ಪ್ರೀತಂಗೌಡ ಹಾಗೂ ಬೆಳ್ಳಿ ಪ್ರಕಾಶ್ ಸಾಥ್ ನೀಡಲಿದ್ದಾರೆ.