ಎ. ಮಂಜು ಪರ ಎಸ್.ಎಂ ಕೃಷ್ಣ ಮತ ಪ್ರಚಾರ

ಎ. ಮಂಜು ಪರ ಎಸ್.ಎಂ ಕೃಷ್ಣ ಮತ ಪ್ರಚಾರ

ಹಾಸನ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಇಂದು ಹಾಸನದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಅವರ ಪರ ಪ್ರಚಾರ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಲಿರುವ ಎಸ್.ಎಂ.ಕೃಷ್ಣ, ಬೆಳಿಗ್ಗೆ 10:30ಕ್ಕೆ ಹಾಸನದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬಳಿಕ 12 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ನಂತರ ಚನ್ನರಾಯಪಟ್ಟಣದಲ್ಲಿ ಎ.ಮಂಜು ಪರ ರೋಡ್ ಶೋ ನಡೆಸಲಿದ್ದಾರೆ. ಎಸ್.ಎಂ.ಕೃಷ್ಣಗೆ ಎ.ಮಂಜು, ಶಾಸಕರಾದ ಪ್ರೀತಂಗೌಡ ಹಾಗೂ ಬೆಳ್ಳಿ ಪ್ರಕಾಶ್ ಸಾಥ್ ನೀಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos