ಕಾಂಗ್ರೆಸ್’ ಗೆ ರಾಜೀನಾಮೆ ನಿರ್ಧಾರ ಮುಂದೂಡಿದ ಎ. ಮಂಜು!

ಕಾಂಗ್ರೆಸ್’ ಗೆ ರಾಜೀನಾಮೆ ನಿರ್ಧಾರ ಮುಂದೂಡಿದ ಎ. ಮಂಜು!

ಹಾಸನ, ಮಾ.16, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಇಂದು ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿದ್ದ ಮಾಜಿ ಸಚಿವ ಎ. ಮಂಜು ಇದೀಗ ದಿಢೀರ್ ಆಗಿ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.

ಹೌದು, ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಗೆ ರಾಜೀನಾಮೆ ನೀಡುವ ಕುರಿತು ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಇಂದು ರಾಜೀನಾಮೆ ನೀಡುತ್ತಿಲ್ಲ. ಬದಲಾಗಿ ಸೋಮವಾರ ಅಂತಿಮ ತೀರ್ಮಾನ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ.

ಎ.ಮಂಜು ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜೀನಾಮೆ ನೀಡದಂತೆ ಮನವೊಲಿಸಿದ್ದಾರೆ ಎನ್ನಲಾಗಿದೆ ಈ ಹಿನ್ನೆಲೆಯಲ್ಲಿ ಮಂಜು ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos