ಅನರ್ಹರ ಜೊತೆಗೆ ಉಳಿದವರಿಗೂ ಸಚಿವ ಸ್ಥಾನ?

ಅನರ್ಹರ ಜೊತೆಗೆ ಉಳಿದವರಿಗೂ ಸಚಿವ ಸ್ಥಾನ?

ಬೆಂಗಳೂರು, ಡಿ. 11: ಸದ್ಯ ಖಾಲಿ ಉಳಿದಿರುವ 16 ಸಚಿವ ಸ್ಥಾನಗಳ ಪೈಕಿ ಉಪಚುನಾವಣೆಯಲ್ಲಿ ಗೆದ್ದಿರುವ 11 ಮಂದಿಗೆ ನೀಡುವುದು ಬಹುತೇಕ ನಿಶ್ಚಿತವಾಗಿದೆ. ಇನ್ನುಳಿದ ಎರಡು ಕ್ಷೇತ್ರಗಳ ಉಪಚುನಾವಣೆ ಬಾಕಿಯಿದೆ. ಇಬ್ಬರು ಅನರ್ಹರು ಸೋಲುಂಡಿದ್ದಾರೆ. ಒಬ್ಬ ಅನರ್ಹ ಶಾಸಕ ಕಣದಿಂದ ಹಿಂದೆ ಸರಿದಿದ್ದಾರೆ. ಇವರೆಲ್ಲರೂ ಸೇರಿಸಿದರೂ ಇನ್ನು ಎರಡು ಸಚಿವ ಸ್ಥಾನಗಳು ಖಾಲಿ ಉಳಿಯುತ್ತವೆ.

ಎರಡು ಸ್ಥಾನಗಳಿಗಾಗಿ ಒತ್ತಡ ತಂತ್ರ ಆರಂಭವಾಗಿದೆ. ಜತೆಗೆ ಇನ್ನುಳಿದ ಅನರ್ಹ ಶಾಸಕರ ಹಾದಿ ಸುಗಮಗೊಳ್ಳುವವರೆಗೆ ಖಾಲಿ ಉಳಿಯುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಿ ಮುಂದೆ ಬಿಟ್ಟುಕೊಟ್ಟರಾಯಿತು ಎಂಬ ಮಾತೂ ಕೇಳಿಬರುತ್ತಿದೆ.

ಹಿರಿಯ ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ರಾಜುಗೌಡ, ಮುರುಗೇಶ್ ನಿರಾಣಿ ಮೊದಲಾದವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಪ್ರಯತ್ನ ಆರಂಭಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಮತ್ತು ಜೆಡಿಎಸ್ನ ಶಾಸಕರನ್ನು ಪಕ್ಷಕ್ಕೆ ಕರೆತರುವಲ್ಲಿ ಶ್ರಮಿಸಿದವರಲ್ಲಿ ಒಬ್ಬರಾಗಿರುವ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರೂ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos