ಮದ್ಯಸಿಗದೆ ವ್ಯಕ್ತಿ ಆತ್ಮಹತ್ಯೆ

ಮದ್ಯಸಿಗದೆ ವ್ಯಕ್ತಿ ಆತ್ಮಹತ್ಯೆ

ಚಿಕ್ಕೋಡಿ, ಏ. 02: ಲಾಕ್‍ಡೌನ್ ಜಾರಿ ಹಿನ್ನೆಲೆಯಲ್ಲಿ  ಹಸಿದರಿಗೆ  ಒಂದು ಹೊತ್ತಿನ ಉಟ ಸಿಗುತ್ತಿಲ ಎಂದು ಸಾಯುತ್ತಿದ್ದರೆ ಇನ್ನೋಂದು ಕಡೆ ಕುಡಿಯೋಕೆ ಸಾರಾಯಿ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರುವ ಘಟನೆ ಶೈಕ್ಷಣಿಕ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ.

ಕೋಥಳಿ ಗ್ರಾಮದ ಪೋಪಟ ಈರಪ್ಪ ಬಡಿಗೇರ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇತ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು. ಕುಡಿಯೋದಕ್ಕೆ ಎಣ್ಣೆ ಸಿಗಲಿಲ್ಲವೆಂದು ಗಲ್ಲಿ ಗಲ್ಲಿ ಸುತ್ತುತ್ತಿದ್ದ. ಇಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೋಥಳಿ ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕಡಕಲಾಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos