ಡೆಂಗ್ಯೂಗೆ ಬಲಿಯಾದ ಬಾಲಕ

ಡೆಂಗ್ಯೂಗೆ ಬಲಿಯಾದ ಬಾಲಕ

ಗಂಗಾವತಿ, ಅ. 18: ಇಮ್ತಿಯಾಜ್  ಮೃತಪಟ್ಟ ಬಾಲಕ. ಶ್ರೀರಾಮನಗರದ 2ನೇ ವಾರ್ಡಿನ ನಿವಾಸಿಯಾಗಿದ್ದಾರೆ. ತೀವ್ರ ಜ್ವರದ ಕಾರಣ ಶ್ರೀರಾಮನಗರದ ಸರಕಾರಿ ಆಸ್ಪತ್ರೆಗೆ ಬಾಲಕನನ್ನು ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದ ಕಾರಣ ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ನಿನ್ನೆ ರಾತ್ರಿ ಇಮ್ತಿಯಾಜ್ ಮೃತಪಟ್ಟಿದ್ದಾನೆ.

ಶ್ರೀರಾಮನಗರದ ಹಾಗೂ ಸುತ್ತಲಿನ ಊರುಗಳಲ್ಲಿ ಕಳೆದ ಹಲವು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದೆ. ಜತೆಗೆ ಇಡೀ ಗ್ರಾಮದಲ್ಲಿರುವ ಕೋಳಿ ಅಂಗಡಿ ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯುವ ಮೂಲಕ ಅನೈರ್ಮಲ್ಯ ಉಂಟಾಗಿದ್ದು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಮಕ್ಕಳು ವೃದ್ದರಿಗೆ ಜ್ವರದ ಪ್ರಕರಣ ಹೆಚ್ಚಾಗಿದ್ದು ಪ್ರತಿ ದಿನ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಜನರು ದಾಖಲಾಗುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos