ಬೈಕಿಗೆ ಬಸ್ ಢಿಕ್ಕಿ: ಬೈಕ್ ಸವಾರ ಸಾವು

ಬೈಕಿಗೆ ಬಸ್ ಢಿಕ್ಕಿ: ಬೈಕ್ ಸವಾರ ಸಾವು

ಮಂಗಳೂರು, ಮಾ.19, ನ್ಯೂಸ್ ಎಕ್ಸ್ ಪ್ರೆಸ್: ಖಾಸಗಿ ಬಸ್ಸು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಗುರುಪುರದಲ್ಲಿ ನಡೆದಿದೆ.

ಕಾರ್ಕಳದಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಅದೇ ರಸ್ತೆಯಲ್ಲಿ ಬೆಳುವಾಯಿಯಿಂದ ಮಂಗಳೂರಿನತ್ತ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ.

ಅತೀ ವೇಗದಲ್ಲಿದ್ದ ಬಸ್ ಮೊದಲು ಪಿಕಪ್ ವಾಹನವೊಂದಕ್ಕೂ ಢಿಕ್ಕಿಯಾಗಿದೆ. ಬಳಿಕ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಎಂದು ತಿಳಿದುಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos