ರಾಯಚೂರು, ನ. 1 : ಅಬ್ದುಲ್ ಕಲಾಂ ಈ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಬ್ದುಲ್ ಕಲಾಂ ಜಯಂತಿ ಮಾಡುವುದು ನಮ್ಮ ಉದ್ದೇಶ ಎಂದು ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿಂದು ಧ್ವಜಾರೋಹಣ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಅಬ್ದುಲ್ ಕಲಾಂ ಜಯಂತಿ ಆಚರಣೆಗೆ ತರುತ್ತೇವೆ. ಅಬ್ದುಲ್ ಕಲಾಂ ಅವರ ಜಯಂತಿ ಆಚರಣೆ ಮಾಡುವುದು ತಪ್ಪಾ(?) ಟಿಪ್ಪು ಜಯಂತೋತ್ಸವದ ಬಗ್ಗೆ ಗೊತ್ತಿಲ್ಲ, ಪಠ್ಯ-ಪುಸ್ತಕದಿಂದ ಟಿಪ್ಪು ಇತಿಹಾಸವನ್ನ ತೆಗೆದುಹಾಕುವುದಿಲ್ಲ ಇದೆಲ್ಲ ಕೇವಲ ಉಹಾಪೋಹ ಅಷ್ಟೇ ಎಂದರು.