ಬೆಂಗಳೂರು, ಅ. 22: ಬಿಬಿಎಂಪಿಗೆ ಕಾಂಗ್ರೆಸ್ ನಿಂದ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರು ಮಹಾನಗರ ಪಾಲಕೆಯ 33ನೇ ವಾರ್ಡ್ ಆದಂತ ಮನೋರಾಯನಪಾಳ್ಯದ ಅಬ್ದುಲ್ ವಾಜಿದ್ ನೇಮಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದಂತ ದಿನೇಶ್ ಗುಂಡೂರಾವ್ ಬೆಂಗಳೂರು ಮಹಾನಗರ ಪಾಲಿಕೆಯ 33ರ ಮನೋರಾಯನಪಾಳ್ಯ ವಾರ್ಡಿನ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಬ್ದುಲ್ ವಾಜಿದ್ ಅವರನ್ನು ಬಿಬಿಎಂಪಿಯ ವಿರೋಧ ಪಕ್ಷದ ನಾಯಕರನ್ನಾಗಿ ಕೆಪಿಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿಯನ್ನು ಮಾಡಿರುತ್ತದೆ ಎಂದು ತಿಳಿಸಿದ್ದಾರೆ.